BREAKING NEWS

ಕನ್ನಡ ಹೋರಾಟಗಾರರು ಗೂಂಡಾಗಳಲ್ಲ : ಪ್ರವೀಣ್ ಶೆಟ್ಟಿ ಕಿಡಿ

ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.

ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.

lokesh

Recent Posts

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

11 mins ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

16 mins ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

18 mins ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

20 mins ago

ಸೀಸನಲ್‌ ಫ್ಲೂ ಹೆಚ್ಚಳ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ…

23 mins ago

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…

56 mins ago