BREAKING NEWS

ಕನ್ನಡ ಹೋರಾಟಗಾರರು ಗೂಂಡಾಗಳಲ್ಲ : ಪ್ರವೀಣ್ ಶೆಟ್ಟಿ ಕಿಡಿ

ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.

ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago