BREAKING NEWS

ಕನ್ನಡ ಹೋರಾಟಗಾರರು ಗೂಂಡಾಗಳಲ್ಲ : ಪ್ರವೀಣ್ ಶೆಟ್ಟಿ ಕಿಡಿ

ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.

ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.

lokesh

Recent Posts

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

3 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

3 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

3 hours ago

ಬೀದಿ ದೀಪಗಳ ನಿರ್ವಹಣೆ ಕೊರತೆ; ಸಾರ್ವಜನಿಕರ ವ್ಯಥೆ

ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…

3 hours ago

ಶಿಕ್ಷಕರ ಜೇಬಿಗೆ ಹೊರೆಯಾದ ಬಿಸಿಯೂಟ

ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…

4 hours ago