ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.
ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…