BREAKING NEWS

ಕನ್ನಡ ಸೀರಿಯಲ್​ ನಟ ಸಂಪತ್​ ಜಯರಾಮ್​ ಆತ್ಮಹತ್ಯೆ

ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟ ಸಂಪತ್ ಜಯರಾಮ್‌ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ ಸಂಪತ್​ ಜಯರಾಮ್​ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪತ್​ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಒಂದು ವರ್ಷದ ಹಿಂದೆ ಮದುವೆ ಆಗಿದ್ದ ಅವರು ಈಗ ಇಹಲೋಕ ತ್ಯಜಿಸಿರುವುದು ಅವರ ಆಪ್ತರಿಗೆ ತೀವ್ರ ನೋವು ಉಂಟುಮಾಡಿದೆ. ನೆಲಮಂಗಲದ ಆಸ್ಪತ್ರೆಯಿಂದ ಎನ್​ಆರ್​ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.
ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ಅಗಲಿದ ಗೆಳೆಯನನ್ನು ನೆನದು ಅವರು ಕಂಬನಿ ಮಿಡಿದಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

3 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

3 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

5 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 hours ago