BREAKING NEWS

ಕನ್ನಡ ಸೀರಿಯಲ್​ ನಟ ಸಂಪತ್​ ಜಯರಾಮ್​ ಆತ್ಮಹತ್ಯೆ

ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟ ಸಂಪತ್ ಜಯರಾಮ್‌ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ ಸಂಪತ್​ ಜಯರಾಮ್​ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪತ್​ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಒಂದು ವರ್ಷದ ಹಿಂದೆ ಮದುವೆ ಆಗಿದ್ದ ಅವರು ಈಗ ಇಹಲೋಕ ತ್ಯಜಿಸಿರುವುದು ಅವರ ಆಪ್ತರಿಗೆ ತೀವ್ರ ನೋವು ಉಂಟುಮಾಡಿದೆ. ನೆಲಮಂಗಲದ ಆಸ್ಪತ್ರೆಯಿಂದ ಎನ್​ಆರ್​ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.
ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ಅಗಲಿದ ಗೆಳೆಯನನ್ನು ನೆನದು ಅವರು ಕಂಬನಿ ಮಿಡಿದಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

32 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

46 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

52 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago