BREAKING NEWS

ಕನ್ನಡ ಸೀರಿಯಲ್​ ನಟ ಸಂಪತ್​ ಜಯರಾಮ್​ ಆತ್ಮಹತ್ಯೆ

ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟ ಸಂಪತ್ ಜಯರಾಮ್‌ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ ಸಂಪತ್​ ಜಯರಾಮ್​ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪತ್​ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಒಂದು ವರ್ಷದ ಹಿಂದೆ ಮದುವೆ ಆಗಿದ್ದ ಅವರು ಈಗ ಇಹಲೋಕ ತ್ಯಜಿಸಿರುವುದು ಅವರ ಆಪ್ತರಿಗೆ ತೀವ್ರ ನೋವು ಉಂಟುಮಾಡಿದೆ. ನೆಲಮಂಗಲದ ಆಸ್ಪತ್ರೆಯಿಂದ ಎನ್​ಆರ್​ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.
ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ಅಗಲಿದ ಗೆಳೆಯನನ್ನು ನೆನದು ಅವರು ಕಂಬನಿ ಮಿಡಿದಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

lokesh

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

8 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

8 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

9 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

9 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

9 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

9 hours ago