ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟ ಸಂಪತ್ ಜಯರಾಮ್ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿದ್ದ ಸಂಪತ್ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್ ಜಯರಾಮ್ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪತ್ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಒಂದು ವರ್ಷದ ಹಿಂದೆ ಮದುವೆ ಆಗಿದ್ದ ಅವರು ಈಗ ಇಹಲೋಕ ತ್ಯಜಿಸಿರುವುದು ಅವರ ಆಪ್ತರಿಗೆ ತೀವ್ರ ನೋವು ಉಂಟುಮಾಡಿದೆ. ನೆಲಮಂಗಲದ ಆಸ್ಪತ್ರೆಯಿಂದ ಎನ್ಆರ್ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.
ಸಂಪತ್ ಜಯರಾಮ್ ನಿಧನಕ್ಕೆ ನಟ ರಾಜೇಶ್ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ಅಗಲಿದ ಗೆಳೆಯನನ್ನು ನೆನದು ಅವರು ಕಂಬನಿ ಮಿಡಿದಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…