BREAKING NEWS

ಅಸಹಜ ವಿದ್ಯುತ್‌ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ಕಂಟಕ ‘ಗ್ಯಾರಂಟಿ’ : ಹೇಳಿದ್ದು 30%, ಏರಿಸಿದ್ದು 50%!

ಬೆಂಗಳೂರು : ರಾಜ್ಯ ಸರಕಾರವು ವಾಣಿಜ್ಯ ಬಳಕೆಯ ವಿದ್ಯುತ್‌ ದರ ಹೆಚ್ಚಿಸಿ ಉತ್ಪಾದನಾ ವಲಯದ ಮೇಲೆ ಗದಾ ಪ್ರಹಾರ ನಡೆಸಿದ್ದು, ದರ ಹೆಚ್ಚಳದ ಕ್ರಮವು ಉದ್ದಿಮೆದಾರರ ಕಣ್ಣು ಕೆಂಪಾಗಿಸಿದೆ.

ಕೋವಿಡ್‌ ಹಾಗೂ ಲಾಕ್‌ಡೌನ್‌ ಕಾಲದ ಆರ್ಥಿಕ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಉತ್ಪಾದನಾ ವಲಯಕ್ಕೆ ಸರಕಾರ ವಿದ್ಯುತ್‌ ದರ ಹೆಚ್ಚಳದ ಮೂಲಕ ದೊಡ್ಡ ಶಾಕ್‌ ಕೊಟ್ಟಿದ್ದು, ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುವ ಆತಂಕ ಎದುರಾಗಿದೆ.

ವಿದ್ಯುತ್‌ ದರ ಹೆಚ್ಚಳದ ಕ್ರಮವು ಮುಖ್ಯವಾಗಿ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಕಂಟಕಪ್ರಾಯ ಎಂದೇ ಹೇಳಲಾಗುತ್ತಿದೆ. ರಾಜ್ಯದಲ್ಲಿರುವ ಸುಮಾರು 8.50 ಲಕ್ಷ ಕೈಗಾರಿಕೆಗಳು 45 ಲಕ್ಷ ಉದ್ಯೋಗಾವಕಾಶ ಸೃಷ್ಟಿಸಿವೆ. ಸರಕಾರದ ಬೊಕ್ಕಸ ತುಂಬಿಸುವಲ್ಲಿನಿ ರ್ಣಾಯಕವಾಗಿರುವ ಕೈಗಾರಿಕೆಗಳ ಕಾರ್ಯ ಚಟುವಟಿಕೆಗಳು ಸಂಪೂರ್ಣವಾಗಿ ವಿದ್ಯುತ್‌ ಮೇಲೆಯೇ ಅವಲಂಬಿತವಾಗಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್‌ನಲ್ಲಿ ಶೇ. 3.5ರಷ್ಟು ವಿದ್ಯುತ್‌ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದೆ.

ವಾಣಿಜ್ಯ ಬಳಕೆಯ ಉದ್ದೇಶದ ವಿದ್ಯುತ್‌ನ ಬಿಲ್‌ ಶೇ. 30ರಷ್ಟು ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಯೂನಿಟ್‌ಗೆ 6.75 ರೂ. ಇತ್ತು. ಇದೀಗ ಪ್ರತಿ ಯೂನಿಟ್‌ ಬೆಲೆ 8.50 ರೂ.ಗೆ ಹೆಚ್ಚಳ ಮಾಡಲಾಗಿದೆ. ಜತೆಗೆ, ನಿಗದಿತ ಶುಲ್ಕವನ್ನು ಶೇ. 40ರಿಂದ 60ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಜೂನ್‌ ತಿಂಗಳಲ್ಲಿ ವಿದ್ಯುತ್‌ ದರವು ಪ್ರತಿ ಯೂನಿಟ್‌ಗೆ 2.89 ರೂ.ಗಳಷ್ಟು ಹೆಚ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. ಏಪ್ರಿಲ್‌ ತಿಂಗಳಿಗೆ ಸಂಬಂಧಿಸಿದ ಅನುಮೋದಿತ 70 ಪೈಸೆ ಹೆಚ್ಚಳದ ಬಾಕಿ, ಜನವರಿ ತಿಂಗಳ ಇಂಧನ ಮತ್ತು ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕದ ಕಾರಣದಿಂದ ಅಸಹಜ ಹೆಚ್ಚಳವಾಗಿದೆ ಎಂದು ಉದ್ಯಮ ಆಕ್ರೋಶಗೊಂಡಿದೆ.

ವಿದ್ಯುತ್‌ ದರ ಹೆಚ್ಚಳದಿಂದ ಕೆರಳಿರುವ ಉತ್ಪಾದನಾ ವಲಯವು ಈಗಾಗಲೇ ಹೋರಾಟದ ಹಾದಿ ಹಿಡಿದಿದೆ. ಮತ್ತೊಂದೆಡೆ ಅಕ್ಕಪಕ್ಕದ ರಾಜ್ಯಗಳಿಗೆ ವಲಸೆ ಹೋಗುವುದಾಗಿ ಎಚ್ಚರಿಕೆ ನೀಡಲಾಗಿದೆ. ದರ ಹೆಚ್ಚಳದ ಆದೇಶವನ್ನು 7 ದಿನದೊಳಗೆ ಹಿಂಪಡೆಯದಿದ್ದರೆ ರಾಜ್ಯದೆಲ್ಲೆಡೆ ಕೈಗಾರಿಕೆಗಳನ್ನು ಬಂದ್‌ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.

ಸರಕಾರ ವಿದ್ಯುತ್‌ ದರ ಹೆಚ್ಚಿಸಿ ಎಂಎಸ್‌ಎಂಇ ಕೈಗಾರಿಕೆಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಉದ್ಯಮದ ಮೇಲಿನ ಹೊರೆ ತಗ್ಗಿಸಬೇಕಾದ ಸರಕಾರಕ್ಕೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ಉದ್ಯಮದ ಆರ್ಥಿಕತೆ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅಥವಾ ಕನಿಷ್ಠ 2 ವರ್ಷಗಳವರೆಗೆ ಉದ್ಯಮವನ್ನು ಘಾಸಿಗೊಳಿಸುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್‌. ನರಸಿಂಹಮೂರ್ತಿ ಹೇಳಿದ್ದಾರೆ.

lokesh

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

5 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

6 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

6 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

6 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

6 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

6 hours ago