ಬೆಂಗಳೂರು : ರಾಜ್ಯ ಸರಕಾರವು ವಾಣಿಜ್ಯ ಬಳಕೆಯ ವಿದ್ಯುತ್ ದರ ಹೆಚ್ಚಿಸಿ ಉತ್ಪಾದನಾ ವಲಯದ ಮೇಲೆ ಗದಾ ಪ್ರಹಾರ ನಡೆಸಿದ್ದು, ದರ ಹೆಚ್ಚಳದ ಕ್ರಮವು ಉದ್ದಿಮೆದಾರರ ಕಣ್ಣು ಕೆಂಪಾಗಿಸಿದೆ.
ಕೋವಿಡ್ ಹಾಗೂ ಲಾಕ್ಡೌನ್ ಕಾಲದ ಆರ್ಥಿಕ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಉತ್ಪಾದನಾ ವಲಯಕ್ಕೆ ಸರಕಾರ ವಿದ್ಯುತ್ ದರ ಹೆಚ್ಚಳದ ಮೂಲಕ ದೊಡ್ಡ ಶಾಕ್ ಕೊಟ್ಟಿದ್ದು, ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುವ ಆತಂಕ ಎದುರಾಗಿದೆ.
ವಿದ್ಯುತ್ ದರ ಹೆಚ್ಚಳದ ಕ್ರಮವು ಮುಖ್ಯವಾಗಿ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್ಎಂಇ) ಕಂಟಕಪ್ರಾಯ ಎಂದೇ ಹೇಳಲಾಗುತ್ತಿದೆ. ರಾಜ್ಯದಲ್ಲಿರುವ ಸುಮಾರು 8.50 ಲಕ್ಷ ಕೈಗಾರಿಕೆಗಳು 45 ಲಕ್ಷ ಉದ್ಯೋಗಾವಕಾಶ ಸೃಷ್ಟಿಸಿವೆ. ಸರಕಾರದ ಬೊಕ್ಕಸ ತುಂಬಿಸುವಲ್ಲಿನಿ ರ್ಣಾಯಕವಾಗಿರುವ ಕೈಗಾರಿಕೆಗಳ ಕಾರ್ಯ ಚಟುವಟಿಕೆಗಳು ಸಂಪೂರ್ಣವಾಗಿ ವಿದ್ಯುತ್ ಮೇಲೆಯೇ ಅವಲಂಬಿತವಾಗಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ನಲ್ಲಿ ಶೇ. 3.5ರಷ್ಟು ವಿದ್ಯುತ್ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದೆ.
ವಾಣಿಜ್ಯ ಬಳಕೆಯ ಉದ್ದೇಶದ ವಿದ್ಯುತ್ನ ಬಿಲ್ ಶೇ. 30ರಷ್ಟು ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಯೂನಿಟ್ಗೆ 6.75 ರೂ. ಇತ್ತು. ಇದೀಗ ಪ್ರತಿ ಯೂನಿಟ್ ಬೆಲೆ 8.50 ರೂ.ಗೆ ಹೆಚ್ಚಳ ಮಾಡಲಾಗಿದೆ. ಜತೆಗೆ, ನಿಗದಿತ ಶುಲ್ಕವನ್ನು ಶೇ. 40ರಿಂದ 60ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಜೂನ್ ತಿಂಗಳಲ್ಲಿ ವಿದ್ಯುತ್ ದರವು ಪ್ರತಿ ಯೂನಿಟ್ಗೆ 2.89 ರೂ.ಗಳಷ್ಟು ಹೆಚ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. ಏಪ್ರಿಲ್ ತಿಂಗಳಿಗೆ ಸಂಬಂಧಿಸಿದ ಅನುಮೋದಿತ 70 ಪೈಸೆ ಹೆಚ್ಚಳದ ಬಾಕಿ, ಜನವರಿ ತಿಂಗಳ ಇಂಧನ ಮತ್ತು ಖರೀದಿ ವೆಚ್ಚ ಹೊಂದಾಣಿಕೆ (ಎಫ್ಪಿಪಿಸಿಎ) ಶುಲ್ಕದ ಕಾರಣದಿಂದ ಅಸಹಜ ಹೆಚ್ಚಳವಾಗಿದೆ ಎಂದು ಉದ್ಯಮ ಆಕ್ರೋಶಗೊಂಡಿದೆ.
ವಿದ್ಯುತ್ ದರ ಹೆಚ್ಚಳದಿಂದ ಕೆರಳಿರುವ ಉತ್ಪಾದನಾ ವಲಯವು ಈಗಾಗಲೇ ಹೋರಾಟದ ಹಾದಿ ಹಿಡಿದಿದೆ. ಮತ್ತೊಂದೆಡೆ ಅಕ್ಕಪಕ್ಕದ ರಾಜ್ಯಗಳಿಗೆ ವಲಸೆ ಹೋಗುವುದಾಗಿ ಎಚ್ಚರಿಕೆ ನೀಡಲಾಗಿದೆ. ದರ ಹೆಚ್ಚಳದ ಆದೇಶವನ್ನು 7 ದಿನದೊಳಗೆ ಹಿಂಪಡೆಯದಿದ್ದರೆ ರಾಜ್ಯದೆಲ್ಲೆಡೆ ಕೈಗಾರಿಕೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.
ಸರಕಾರ ವಿದ್ಯುತ್ ದರ ಹೆಚ್ಚಿಸಿ ಎಂಎಸ್ಎಂಇ ಕೈಗಾರಿಕೆಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಉದ್ಯಮದ ಮೇಲಿನ ಹೊರೆ ತಗ್ಗಿಸಬೇಕಾದ ಸರಕಾರಕ್ಕೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ಉದ್ಯಮದ ಆರ್ಥಿಕತೆ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅಥವಾ ಕನಿಷ್ಠ 2 ವರ್ಷಗಳವರೆಗೆ ಉದ್ಯಮವನ್ನು ಘಾಸಿಗೊಳಿಸುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ ಹೇಳಿದ್ದಾರೆ.
ದಿನೇಶ್ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…
ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…