ಬೆಂಗಳೂರು : ರಾಜ್ಯ ಸರಕಾರವು ವಾಣಿಜ್ಯ ಬಳಕೆಯ ವಿದ್ಯುತ್ ದರ ಹೆಚ್ಚಿಸಿ ಉತ್ಪಾದನಾ ವಲಯದ ಮೇಲೆ ಗದಾ ಪ್ರಹಾರ ನಡೆಸಿದ್ದು, ದರ ಹೆಚ್ಚಳದ ಕ್ರಮವು ಉದ್ದಿಮೆದಾರರ ಕಣ್ಣು ಕೆಂಪಾಗಿಸಿದೆ.
ಕೋವಿಡ್ ಹಾಗೂ ಲಾಕ್ಡೌನ್ ಕಾಲದ ಆರ್ಥಿಕ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಉತ್ಪಾದನಾ ವಲಯಕ್ಕೆ ಸರಕಾರ ವಿದ್ಯುತ್ ದರ ಹೆಚ್ಚಳದ ಮೂಲಕ ದೊಡ್ಡ ಶಾಕ್ ಕೊಟ್ಟಿದ್ದು, ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುವ ಆತಂಕ ಎದುರಾಗಿದೆ.
ವಿದ್ಯುತ್ ದರ ಹೆಚ್ಚಳದ ಕ್ರಮವು ಮುಖ್ಯವಾಗಿ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್ಎಂಇ) ಕಂಟಕಪ್ರಾಯ ಎಂದೇ ಹೇಳಲಾಗುತ್ತಿದೆ. ರಾಜ್ಯದಲ್ಲಿರುವ ಸುಮಾರು 8.50 ಲಕ್ಷ ಕೈಗಾರಿಕೆಗಳು 45 ಲಕ್ಷ ಉದ್ಯೋಗಾವಕಾಶ ಸೃಷ್ಟಿಸಿವೆ. ಸರಕಾರದ ಬೊಕ್ಕಸ ತುಂಬಿಸುವಲ್ಲಿನಿ ರ್ಣಾಯಕವಾಗಿರುವ ಕೈಗಾರಿಕೆಗಳ ಕಾರ್ಯ ಚಟುವಟಿಕೆಗಳು ಸಂಪೂರ್ಣವಾಗಿ ವಿದ್ಯುತ್ ಮೇಲೆಯೇ ಅವಲಂಬಿತವಾಗಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ನಲ್ಲಿ ಶೇ. 3.5ರಷ್ಟು ವಿದ್ಯುತ್ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದೆ.
ವಾಣಿಜ್ಯ ಬಳಕೆಯ ಉದ್ದೇಶದ ವಿದ್ಯುತ್ನ ಬಿಲ್ ಶೇ. 30ರಷ್ಟು ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಯೂನಿಟ್ಗೆ 6.75 ರೂ. ಇತ್ತು. ಇದೀಗ ಪ್ರತಿ ಯೂನಿಟ್ ಬೆಲೆ 8.50 ರೂ.ಗೆ ಹೆಚ್ಚಳ ಮಾಡಲಾಗಿದೆ. ಜತೆಗೆ, ನಿಗದಿತ ಶುಲ್ಕವನ್ನು ಶೇ. 40ರಿಂದ 60ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಜೂನ್ ತಿಂಗಳಲ್ಲಿ ವಿದ್ಯುತ್ ದರವು ಪ್ರತಿ ಯೂನಿಟ್ಗೆ 2.89 ರೂ.ಗಳಷ್ಟು ಹೆಚ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. ಏಪ್ರಿಲ್ ತಿಂಗಳಿಗೆ ಸಂಬಂಧಿಸಿದ ಅನುಮೋದಿತ 70 ಪೈಸೆ ಹೆಚ್ಚಳದ ಬಾಕಿ, ಜನವರಿ ತಿಂಗಳ ಇಂಧನ ಮತ್ತು ಖರೀದಿ ವೆಚ್ಚ ಹೊಂದಾಣಿಕೆ (ಎಫ್ಪಿಪಿಸಿಎ) ಶುಲ್ಕದ ಕಾರಣದಿಂದ ಅಸಹಜ ಹೆಚ್ಚಳವಾಗಿದೆ ಎಂದು ಉದ್ಯಮ ಆಕ್ರೋಶಗೊಂಡಿದೆ.
ವಿದ್ಯುತ್ ದರ ಹೆಚ್ಚಳದಿಂದ ಕೆರಳಿರುವ ಉತ್ಪಾದನಾ ವಲಯವು ಈಗಾಗಲೇ ಹೋರಾಟದ ಹಾದಿ ಹಿಡಿದಿದೆ. ಮತ್ತೊಂದೆಡೆ ಅಕ್ಕಪಕ್ಕದ ರಾಜ್ಯಗಳಿಗೆ ವಲಸೆ ಹೋಗುವುದಾಗಿ ಎಚ್ಚರಿಕೆ ನೀಡಲಾಗಿದೆ. ದರ ಹೆಚ್ಚಳದ ಆದೇಶವನ್ನು 7 ದಿನದೊಳಗೆ ಹಿಂಪಡೆಯದಿದ್ದರೆ ರಾಜ್ಯದೆಲ್ಲೆಡೆ ಕೈಗಾರಿಕೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.
ಸರಕಾರ ವಿದ್ಯುತ್ ದರ ಹೆಚ್ಚಿಸಿ ಎಂಎಸ್ಎಂಇ ಕೈಗಾರಿಕೆಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಉದ್ಯಮದ ಮೇಲಿನ ಹೊರೆ ತಗ್ಗಿಸಬೇಕಾದ ಸರಕಾರಕ್ಕೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ಉದ್ಯಮದ ಆರ್ಥಿಕತೆ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅಥವಾ ಕನಿಷ್ಠ 2 ವರ್ಷಗಳವರೆಗೆ ಉದ್ಯಮವನ್ನು ಘಾಸಿಗೊಳಿಸುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ ಹೇಳಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…