BREAKING NEWS

ಅಸಹಜ ವಿದ್ಯುತ್‌ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ಕಂಟಕ ‘ಗ್ಯಾರಂಟಿ’ : ಹೇಳಿದ್ದು 30%, ಏರಿಸಿದ್ದು 50%!

ಬೆಂಗಳೂರು : ರಾಜ್ಯ ಸರಕಾರವು ವಾಣಿಜ್ಯ ಬಳಕೆಯ ವಿದ್ಯುತ್‌ ದರ ಹೆಚ್ಚಿಸಿ ಉತ್ಪಾದನಾ ವಲಯದ ಮೇಲೆ ಗದಾ ಪ್ರಹಾರ ನಡೆಸಿದ್ದು, ದರ ಹೆಚ್ಚಳದ ಕ್ರಮವು ಉದ್ದಿಮೆದಾರರ ಕಣ್ಣು ಕೆಂಪಾಗಿಸಿದೆ.

ಕೋವಿಡ್‌ ಹಾಗೂ ಲಾಕ್‌ಡೌನ್‌ ಕಾಲದ ಆರ್ಥಿಕ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಉತ್ಪಾದನಾ ವಲಯಕ್ಕೆ ಸರಕಾರ ವಿದ್ಯುತ್‌ ದರ ಹೆಚ್ಚಳದ ಮೂಲಕ ದೊಡ್ಡ ಶಾಕ್‌ ಕೊಟ್ಟಿದ್ದು, ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುವ ಆತಂಕ ಎದುರಾಗಿದೆ.

ವಿದ್ಯುತ್‌ ದರ ಹೆಚ್ಚಳದ ಕ್ರಮವು ಮುಖ್ಯವಾಗಿ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಕಂಟಕಪ್ರಾಯ ಎಂದೇ ಹೇಳಲಾಗುತ್ತಿದೆ. ರಾಜ್ಯದಲ್ಲಿರುವ ಸುಮಾರು 8.50 ಲಕ್ಷ ಕೈಗಾರಿಕೆಗಳು 45 ಲಕ್ಷ ಉದ್ಯೋಗಾವಕಾಶ ಸೃಷ್ಟಿಸಿವೆ. ಸರಕಾರದ ಬೊಕ್ಕಸ ತುಂಬಿಸುವಲ್ಲಿನಿ ರ್ಣಾಯಕವಾಗಿರುವ ಕೈಗಾರಿಕೆಗಳ ಕಾರ್ಯ ಚಟುವಟಿಕೆಗಳು ಸಂಪೂರ್ಣವಾಗಿ ವಿದ್ಯುತ್‌ ಮೇಲೆಯೇ ಅವಲಂಬಿತವಾಗಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್‌ನಲ್ಲಿ ಶೇ. 3.5ರಷ್ಟು ವಿದ್ಯುತ್‌ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದೆ.

ವಾಣಿಜ್ಯ ಬಳಕೆಯ ಉದ್ದೇಶದ ವಿದ್ಯುತ್‌ನ ಬಿಲ್‌ ಶೇ. 30ರಷ್ಟು ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಯೂನಿಟ್‌ಗೆ 6.75 ರೂ. ಇತ್ತು. ಇದೀಗ ಪ್ರತಿ ಯೂನಿಟ್‌ ಬೆಲೆ 8.50 ರೂ.ಗೆ ಹೆಚ್ಚಳ ಮಾಡಲಾಗಿದೆ. ಜತೆಗೆ, ನಿಗದಿತ ಶುಲ್ಕವನ್ನು ಶೇ. 40ರಿಂದ 60ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಜೂನ್‌ ತಿಂಗಳಲ್ಲಿ ವಿದ್ಯುತ್‌ ದರವು ಪ್ರತಿ ಯೂನಿಟ್‌ಗೆ 2.89 ರೂ.ಗಳಷ್ಟು ಹೆಚ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. ಏಪ್ರಿಲ್‌ ತಿಂಗಳಿಗೆ ಸಂಬಂಧಿಸಿದ ಅನುಮೋದಿತ 70 ಪೈಸೆ ಹೆಚ್ಚಳದ ಬಾಕಿ, ಜನವರಿ ತಿಂಗಳ ಇಂಧನ ಮತ್ತು ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕದ ಕಾರಣದಿಂದ ಅಸಹಜ ಹೆಚ್ಚಳವಾಗಿದೆ ಎಂದು ಉದ್ಯಮ ಆಕ್ರೋಶಗೊಂಡಿದೆ.

ವಿದ್ಯುತ್‌ ದರ ಹೆಚ್ಚಳದಿಂದ ಕೆರಳಿರುವ ಉತ್ಪಾದನಾ ವಲಯವು ಈಗಾಗಲೇ ಹೋರಾಟದ ಹಾದಿ ಹಿಡಿದಿದೆ. ಮತ್ತೊಂದೆಡೆ ಅಕ್ಕಪಕ್ಕದ ರಾಜ್ಯಗಳಿಗೆ ವಲಸೆ ಹೋಗುವುದಾಗಿ ಎಚ್ಚರಿಕೆ ನೀಡಲಾಗಿದೆ. ದರ ಹೆಚ್ಚಳದ ಆದೇಶವನ್ನು 7 ದಿನದೊಳಗೆ ಹಿಂಪಡೆಯದಿದ್ದರೆ ರಾಜ್ಯದೆಲ್ಲೆಡೆ ಕೈಗಾರಿಕೆಗಳನ್ನು ಬಂದ್‌ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.

ಸರಕಾರ ವಿದ್ಯುತ್‌ ದರ ಹೆಚ್ಚಿಸಿ ಎಂಎಸ್‌ಎಂಇ ಕೈಗಾರಿಕೆಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಉದ್ಯಮದ ಮೇಲಿನ ಹೊರೆ ತಗ್ಗಿಸಬೇಕಾದ ಸರಕಾರಕ್ಕೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ಉದ್ಯಮದ ಆರ್ಥಿಕತೆ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅಥವಾ ಕನಿಷ್ಠ 2 ವರ್ಷಗಳವರೆಗೆ ಉದ್ಯಮವನ್ನು ಘಾಸಿಗೊಳಿಸುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್‌. ನರಸಿಂಹಮೂರ್ತಿ ಹೇಳಿದ್ದಾರೆ.

lokesh

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

21 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

1 hour ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago