BREAKING NEWS

ಪ್ರತಿಷ್ಠಿತ ʼಸಿಲ್ವರ್‌ ಪೀಕಾಕ್‌ ಅವಾರ್ಡ್‌ʼ ಮುಡಿಗೇರಿಸಿಕೊಂಡ ಕಾಂತಾರ; ಕನ್ನಡ ಚಿತ್ರರಂಗದ ಪಾಲಿಗಿದು ದಾಖಲೆ

ನಿನ್ನೆ (ನವೆಂಬರ್‌ 27) ಕಾಂತಾರ ಚಾಪ್ಟರ್‌ 1ರ ಫಸ್ಟ್‌ಲುಕ್ ಟೀಸರ್‌ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್‌ 28 ) ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾದಲ್ಲಿ ಸಿಲ್ವರ್‌ ಪೀಕಾಕ್‌ ಅವಾರ್ಡ್‌ ಅನ್ನು ಬಾಚಿಕೊಂಡಿದೆ.

54ನೇ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್‌ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್‌ಎಫ್‌ಐ “ಸ್ಪೆಷಲ್‌ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.

ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್‌ ಅವಾರ್ಡ್‌ ಗೆದ್ದ  ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.

ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್‌ ನಾಗ್‌ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್‌ ಪೀಕಾಕ್‌ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು. 

andolana

Recent Posts

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

12 mins ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

20 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

31 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

46 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

56 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago