BREAKING NEWS

ಪ್ರತಿಷ್ಠಿತ ʼಸಿಲ್ವರ್‌ ಪೀಕಾಕ್‌ ಅವಾರ್ಡ್‌ʼ ಮುಡಿಗೇರಿಸಿಕೊಂಡ ಕಾಂತಾರ; ಕನ್ನಡ ಚಿತ್ರರಂಗದ ಪಾಲಿಗಿದು ದಾಖಲೆ

ನಿನ್ನೆ (ನವೆಂಬರ್‌ 27) ಕಾಂತಾರ ಚಾಪ್ಟರ್‌ 1ರ ಫಸ್ಟ್‌ಲುಕ್ ಟೀಸರ್‌ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್‌ 28 ) ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾದಲ್ಲಿ ಸಿಲ್ವರ್‌ ಪೀಕಾಕ್‌ ಅವಾರ್ಡ್‌ ಅನ್ನು ಬಾಚಿಕೊಂಡಿದೆ.

54ನೇ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್‌ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್‌ಎಫ್‌ಐ “ಸ್ಪೆಷಲ್‌ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.

ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್‌ ಅವಾರ್ಡ್‌ ಗೆದ್ದ  ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.

ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್‌ ನಾಗ್‌ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್‌ ಪೀಕಾಕ್‌ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು. 

andolana

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago