ನಿನ್ನೆ (ನವೆಂಬರ್ 27) ಕಾಂತಾರ ಚಾಪ್ಟರ್ 1ರ ಫಸ್ಟ್ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್ 28 ) ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಸಿಲ್ವರ್ ಪೀಕಾಕ್ ಅವಾರ್ಡ್ ಅನ್ನು ಬಾಚಿಕೊಂಡಿದೆ.
54ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್ಎಫ್ಐ “ಸ್ಪೆಷಲ್ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.
ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್ ಅವಾರ್ಡ್ ಗೆದ್ದ ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.
ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್ ಪೀಕಾಕ್ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್ ನಾಗ್ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್ ಪೀಕಾಕ್ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…