BREAKING NEWS

ಪ್ರತಿಷ್ಠಿತ ʼಸಿಲ್ವರ್‌ ಪೀಕಾಕ್‌ ಅವಾರ್ಡ್‌ʼ ಮುಡಿಗೇರಿಸಿಕೊಂಡ ಕಾಂತಾರ; ಕನ್ನಡ ಚಿತ್ರರಂಗದ ಪಾಲಿಗಿದು ದಾಖಲೆ

ನಿನ್ನೆ (ನವೆಂಬರ್‌ 27) ಕಾಂತಾರ ಚಾಪ್ಟರ್‌ 1ರ ಫಸ್ಟ್‌ಲುಕ್ ಟೀಸರ್‌ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್‌ 28 ) ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾದಲ್ಲಿ ಸಿಲ್ವರ್‌ ಪೀಕಾಕ್‌ ಅವಾರ್ಡ್‌ ಅನ್ನು ಬಾಚಿಕೊಂಡಿದೆ.

54ನೇ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್‌ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್‌ಎಫ್‌ಐ “ಸ್ಪೆಷಲ್‌ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.

ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್‌ ಅವಾರ್ಡ್‌ ಗೆದ್ದ  ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.

ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್‌ ನಾಗ್‌ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್‌ ಪೀಕಾಕ್‌ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು. 

andolana

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

1 hour ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago