ನಿನ್ನೆ (ನವೆಂಬರ್ 27) ಕಾಂತಾರ ಚಾಪ್ಟರ್ 1ರ ಫಸ್ಟ್ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್ 28 ) ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಸಿಲ್ವರ್ ಪೀಕಾಕ್ ಅವಾರ್ಡ್ ಅನ್ನು ಬಾಚಿಕೊಂಡಿದೆ.
54ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್ಎಫ್ಐ “ಸ್ಪೆಷಲ್ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.
ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್ ಅವಾರ್ಡ್ ಗೆದ್ದ ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.
ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್ ಪೀಕಾಕ್ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್ ನಾಗ್ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್ ಪೀಕಾಕ್ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…