BREAKING NEWS

ಪ್ರತಿಷ್ಠಿತ ʼಸಿಲ್ವರ್‌ ಪೀಕಾಕ್‌ ಅವಾರ್ಡ್‌ʼ ಮುಡಿಗೇರಿಸಿಕೊಂಡ ಕಾಂತಾರ; ಕನ್ನಡ ಚಿತ್ರರಂಗದ ಪಾಲಿಗಿದು ದಾಖಲೆ

ನಿನ್ನೆ (ನವೆಂಬರ್‌ 27) ಕಾಂತಾರ ಚಾಪ್ಟರ್‌ 1ರ ಫಸ್ಟ್‌ಲುಕ್ ಟೀಸರ್‌ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್‌ 28 ) ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾದಲ್ಲಿ ಸಿಲ್ವರ್‌ ಪೀಕಾಕ್‌ ಅವಾರ್ಡ್‌ ಅನ್ನು ಬಾಚಿಕೊಂಡಿದೆ.

54ನೇ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್‌ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್‌ಎಫ್‌ಐ “ಸ್ಪೆಷಲ್‌ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.

ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್‌ ಅವಾರ್ಡ್‌ ಗೆದ್ದ  ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.

ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್‌ ನಾಗ್‌ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್‌ ಪೀಕಾಕ್‌ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು. 

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago