BREAKING NEWS

ಪ್ರತಿಷ್ಠಿತ ʼಸಿಲ್ವರ್‌ ಪೀಕಾಕ್‌ ಅವಾರ್ಡ್‌ʼ ಮುಡಿಗೇರಿಸಿಕೊಂಡ ಕಾಂತಾರ; ಕನ್ನಡ ಚಿತ್ರರಂಗದ ಪಾಲಿಗಿದು ದಾಖಲೆ

ನಿನ್ನೆ (ನವೆಂಬರ್‌ 27) ಕಾಂತಾರ ಚಾಪ್ಟರ್‌ 1ರ ಫಸ್ಟ್‌ಲುಕ್ ಟೀಸರ್‌ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್‌ 28 ) ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾದಲ್ಲಿ ಸಿಲ್ವರ್‌ ಪೀಕಾಕ್‌ ಅವಾರ್ಡ್‌ ಅನ್ನು ಬಾಚಿಕೊಂಡಿದೆ.

54ನೇ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್‌ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್‌ಎಫ್‌ಐ “ಸ್ಪೆಷಲ್‌ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್‌ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.

ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್‌ ಅವಾರ್ಡ್‌ ಗೆದ್ದ  ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.

ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್‌ ನಾಗ್‌ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್‌ ಪೀಕಾಕ್‌ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು. 

andolana

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

4 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

5 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

5 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

6 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

9 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

10 hours ago