BREAKING NEWS

ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು: ಕೆ.ಎಸ್ ಈಶ್ವರಪ್ಪ

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ ಸಮ್ಮಿಶ್ರ ಸರಕಾರ. ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್‌ ವರದಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರೆ, ಡಿ.ಕೆ.ಶಿವಕುಮಾರ್ ವರದಿ ಬಿಡುಗಡೆ ಮಾಡಲು ಬಿಡಲ್ಲ ಎಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼʼರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಲೆಕ್ಕವೇ ಸಿಗುತ್ತಿಲ್ಲ.‌ ಜಿಲ್ಲಾ ಮಂತ್ರಿಗಳು ರೈತರ ಕಷ್ಟವನ್ನು ಆಲಿಸುತ್ತಿಲ್ಲ. ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆʼʼ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕನಿಲ್ಲದ ಹಾಗೂ ಜೆಡಿಎಸ್ ಜನರಿಲ್ಲದ ಪಕ್ಷಗಳು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ʼʼದೇಶದಲ್ಲಿ ಯಾವುದೇ ವ್ಯಕ್ತಿಯನ್ನು ಕೇಳಿದರೂ ಅವರಿಗೆ ನರೇಂದ್ರ ಮೋದಿ ಗೊತ್ತು, ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿನಾʼʼ ಎಂದು ಪ್ರಶ್ನಿಸಿದರು.

ʼʼಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದಿದ್ದ ಪ್ರಿಯಾಂಕ ಖರ್ಗೆ ಈಗ ನಾನೆ ಸಿಎಂ ಆಗಬೇಕು ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ. ಇದು ಯಾವ ನ್ಯಾಯ, ಅವರಿಗೆ ಮಾನ ಮರ್ಯಾದೆ ಇದಿಯಾʼ?ʼ ಎಂದು ಪ್ರಶ್ನಿಸಿದರು.

andolanait

Recent Posts

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

23 mins ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

51 mins ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

2 hours ago

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

2 hours ago

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ; ಓರ್ವ ಸಾವು ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4ರಷ್ಟು…

3 hours ago

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…

3 hours ago