BREAKING NEWS

ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು: ಕೆ.ಎಸ್ ಈಶ್ವರಪ್ಪ

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ ಸಮ್ಮಿಶ್ರ ಸರಕಾರ. ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್‌ ವರದಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರೆ, ಡಿ.ಕೆ.ಶಿವಕುಮಾರ್ ವರದಿ ಬಿಡುಗಡೆ ಮಾಡಲು ಬಿಡಲ್ಲ ಎಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼʼರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಲೆಕ್ಕವೇ ಸಿಗುತ್ತಿಲ್ಲ.‌ ಜಿಲ್ಲಾ ಮಂತ್ರಿಗಳು ರೈತರ ಕಷ್ಟವನ್ನು ಆಲಿಸುತ್ತಿಲ್ಲ. ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆʼʼ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕನಿಲ್ಲದ ಹಾಗೂ ಜೆಡಿಎಸ್ ಜನರಿಲ್ಲದ ಪಕ್ಷಗಳು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ʼʼದೇಶದಲ್ಲಿ ಯಾವುದೇ ವ್ಯಕ್ತಿಯನ್ನು ಕೇಳಿದರೂ ಅವರಿಗೆ ನರೇಂದ್ರ ಮೋದಿ ಗೊತ್ತು, ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿನಾʼʼ ಎಂದು ಪ್ರಶ್ನಿಸಿದರು.

ʼʼಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದಿದ್ದ ಪ್ರಿಯಾಂಕ ಖರ್ಗೆ ಈಗ ನಾನೆ ಸಿಎಂ ಆಗಬೇಕು ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ. ಇದು ಯಾವ ನ್ಯಾಯ, ಅವರಿಗೆ ಮಾನ ಮರ್ಯಾದೆ ಇದಿಯಾʼ?ʼ ಎಂದು ಪ್ರಶ್ನಿಸಿದರು.

andolanait

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

3 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

3 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

3 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

4 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

4 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

4 hours ago