ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ ಸಮ್ಮಿಶ್ರ ಸರಕಾರ. ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್ ವರದಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರೆ, ಡಿ.ಕೆ.ಶಿವಕುಮಾರ್ ವರದಿ ಬಿಡುಗಡೆ ಮಾಡಲು ಬಿಡಲ್ಲ ಎಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼʼರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಲೆಕ್ಕವೇ ಸಿಗುತ್ತಿಲ್ಲ. ಜಿಲ್ಲಾ ಮಂತ್ರಿಗಳು ರೈತರ ಕಷ್ಟವನ್ನು ಆಲಿಸುತ್ತಿಲ್ಲ. ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆʼʼ ಎಂದು ಅವರು ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕನಿಲ್ಲದ ಹಾಗೂ ಜೆಡಿಎಸ್ ಜನರಿಲ್ಲದ ಪಕ್ಷಗಳು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ʼʼದೇಶದಲ್ಲಿ ಯಾವುದೇ ವ್ಯಕ್ತಿಯನ್ನು ಕೇಳಿದರೂ ಅವರಿಗೆ ನರೇಂದ್ರ ಮೋದಿ ಗೊತ್ತು, ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿನಾʼʼ ಎಂದು ಪ್ರಶ್ನಿಸಿದರು.
ʼʼಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದಿದ್ದ ಪ್ರಿಯಾಂಕ ಖರ್ಗೆ ಈಗ ನಾನೆ ಸಿಎಂ ಆಗಬೇಕು ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ. ಇದು ಯಾವ ನ್ಯಾಯ, ಅವರಿಗೆ ಮಾನ ಮರ್ಯಾದೆ ಇದಿಯಾʼ?ʼ ಎಂದು ಪ್ರಶ್ನಿಸಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…