BREAKING NEWS

ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು: ಕೆ.ಎಸ್ ಈಶ್ವರಪ್ಪ

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ ಸಮ್ಮಿಶ್ರ ಸರಕಾರ. ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್‌ ವರದಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರೆ, ಡಿ.ಕೆ.ಶಿವಕುಮಾರ್ ವರದಿ ಬಿಡುಗಡೆ ಮಾಡಲು ಬಿಡಲ್ಲ ಎಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼʼರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಲೆಕ್ಕವೇ ಸಿಗುತ್ತಿಲ್ಲ.‌ ಜಿಲ್ಲಾ ಮಂತ್ರಿಗಳು ರೈತರ ಕಷ್ಟವನ್ನು ಆಲಿಸುತ್ತಿಲ್ಲ. ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆʼʼ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕನಿಲ್ಲದ ಹಾಗೂ ಜೆಡಿಎಸ್ ಜನರಿಲ್ಲದ ಪಕ್ಷಗಳು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ʼʼದೇಶದಲ್ಲಿ ಯಾವುದೇ ವ್ಯಕ್ತಿಯನ್ನು ಕೇಳಿದರೂ ಅವರಿಗೆ ನರೇಂದ್ರ ಮೋದಿ ಗೊತ್ತು, ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿನಾʼʼ ಎಂದು ಪ್ರಶ್ನಿಸಿದರು.

ʼʼಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದಿದ್ದ ಪ್ರಿಯಾಂಕ ಖರ್ಗೆ ಈಗ ನಾನೆ ಸಿಎಂ ಆಗಬೇಕು ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ. ಇದು ಯಾವ ನ್ಯಾಯ, ಅವರಿಗೆ ಮಾನ ಮರ್ಯಾದೆ ಇದಿಯಾʼ?ʼ ಎಂದು ಪ್ರಶ್ನಿಸಿದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago