BREAKING NEWS

ಕರ್ನಾಟಕ ವಿಧಾನಸಭಾ ಚುನಾವಣೆ : 406 ನಾಮಪತ್ರ ತಿರಸ್ಕೃತ

ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್‌,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್‌ ನ 218 ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥೀ ಬಿ.ಝಡ್.ಜಮೀರ್‌ ಅಹಮ್ಮದ್‌ ಖಾನ್‌,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್‌ ವಿಶ್ವನಾಥ್‌,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ ನ ಟಿ.ಎನ್‌ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.

lokesh

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

2 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

4 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

4 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

4 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

5 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

6 hours ago