ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್ ನ 218 ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥೀ ಬಿ.ಝಡ್.ಜಮೀರ್ ಅಹಮ್ಮದ್ ಖಾನ್,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್ ವಿಶ್ವನಾಥ್,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್ ನ ಟಿ.ಎನ್ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…