BREAKING NEWS

ಕರ್ನಾಟಕ ವಿಧಾನಸಭಾ ಚುನಾವಣೆ : 406 ನಾಮಪತ್ರ ತಿರಸ್ಕೃತ

ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್‌,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್‌ ನ 218 ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥೀ ಬಿ.ಝಡ್.ಜಮೀರ್‌ ಅಹಮ್ಮದ್‌ ಖಾನ್‌,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್‌ ವಿಶ್ವನಾಥ್‌,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ ನ ಟಿ.ಎನ್‌ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.

lokesh

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

3 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

4 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

5 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

6 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

7 hours ago