BREAKING NEWS

ಕರ್ನಾಟಕ ವಿಧಾನಸಭಾ ಚುನಾವಣೆ : 406 ನಾಮಪತ್ರ ತಿರಸ್ಕೃತ

ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್‌,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್‌ ನ 218 ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥೀ ಬಿ.ಝಡ್.ಜಮೀರ್‌ ಅಹಮ್ಮದ್‌ ಖಾನ್‌,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್‌ ವಿಶ್ವನಾಥ್‌,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ ನ ಟಿ.ಎನ್‌ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.

lokesh

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

6 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

13 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

13 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago