ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್ ನ 218 ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥೀ ಬಿ.ಝಡ್.ಜಮೀರ್ ಅಹಮ್ಮದ್ ಖಾನ್,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್ ವಿಶ್ವನಾಥ್,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್ ನ ಟಿ.ಎನ್ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…