ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಕರ್ನಾಟಕ ಬಂದ್ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕ ಬಂದ್ ಹಿನ್ನೆಲೆ ಹೆಚ್ಚಿನ ಪ್ರಯಾಣಿಕರು ಕೊನೆ ಕ್ಷಣದಲ್ಲಿ ತಮ್ಮ ವಿಮಾನದ ಟಿಕೆಟ್ಗಳನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕಾರಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟಗಳನ್ನು ರದ್ದು ಮಾಡಿವೆ ಎಂದು ತಿಳಿದುಬಂದಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…