ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕ, ಭಾಷಾವಾರು ವೈವಿಧ್ಯತೆ ಹೊಂದಿರುವ ಭಾರತದಂತಹ ದೇಶಗಳಿಗೆ ಏಕರೂಪ ಶಿಕ್ಷಣ ನೀತಿ ಸರಿಹೊಂದುವುದಿಲ್ಲ. ಕರ್ನಾಟಕದ ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿಯನ್ನು ತರಲಾಗುವುದು.
ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಯುವಜನತೆ ಜಾಗತಿಕವಾಗಿ ಪ್ರಬಲ ಸ್ಪರ್ಧೆಯೊಡ್ಡಲು ಮತ್ತು ಅರ್ಥವತ್ತಾದ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲ ಮಾಡಿಕೊಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಪಕ್ಷ ಆರಂಭದಿಂದಲೂ ವಿರೋಧಿಸುತ್ತಾ ಬಂದಿತ್ತು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…