ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕ, ಭಾಷಾವಾರು ವೈವಿಧ್ಯತೆ ಹೊಂದಿರುವ ಭಾರತದಂತಹ ದೇಶಗಳಿಗೆ ಏಕರೂಪ ಶಿಕ್ಷಣ ನೀತಿ ಸರಿಹೊಂದುವುದಿಲ್ಲ. ಕರ್ನಾಟಕದ ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿಯನ್ನು ತರಲಾಗುವುದು.
ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಯುವಜನತೆ ಜಾಗತಿಕವಾಗಿ ಪ್ರಬಲ ಸ್ಪರ್ಧೆಯೊಡ್ಡಲು ಮತ್ತು ಅರ್ಥವತ್ತಾದ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲ ಮಾಡಿಕೊಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಪಕ್ಷ ಆರಂಭದಿಂದಲೂ ವಿರೋಧಿಸುತ್ತಾ ಬಂದಿತ್ತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…