Mysore
27
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಕರ್ನಾಟಕ ಬಜೆಟ್‌ 2023-24: ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಗಳಿಗೆ ಸಿಎಂ ಕೊಕ್‌!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಕೊಕ್‌ ನೀಡಿದ್ದಾರೆ. ಪ್ರಮುಖವಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿ ವಿದ್ಯಾನಿಧಿ ಯೋಜನೆಗೆ ಅನುದಾನವನ್ನು ಸಿದ್ದರಾಮಯ್ಯ ಮುಂದುವರಿಸಿಲ್ಲ.

ಅದಲ್ಲದೇ ಬಿಎಸ್‌ ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆಗೂ ಕೂಡ ಸಿದ್ದರಾಮಯ್ಯ ಅವರು ಅನುದಾನದ ಹಂಚಿಕೆ ಮಾಡಿಲ್ಲ. ಇನ್ನು, ಜಿಲ್ಲೆಗೊಂದು ಗೋಶಾಲೆ ಯೋಜನೆಗೂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಬ್ರೇಕ್‌ ಹಾಕಿದ್ದು, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಸಹಾಯ ಧನ ನೀಡುವ ಯೋಜನೆಯನ್ನು ಕೂಡ ಸಿದ್ದರಾಮಯ್ಯ ಕೈಬಿಟ್ಟಿದ್ದಾರೆ.

ಯಾವೆಲ್ಲಾ ಬಿಜೆಪಿ ಯೋಜನೆಗಳಿಗೆ ಸಿದ್ದು ಕೊಕ್‌?

  • ರೈತ ವಿದ್ಯಾನಿಧಿ ಯೋಜನೆ (ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ)
  • ವಿವೇಕ ಶಾಲೆ ಅಭಿವೃದ್ಧಿ ಯೋಜನೆ
  • ಹೆಣ್ಣುಮಕ್ಕಳ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆ
  • ಜಿಲ್ಲೆಗೊಂದು ಗೋಶಾಲೆ ಯೋಜನೆ
  • ಎಪಿಎಂಸಿ ಕಾಯ್ದೆ ರದ್ದು
  • ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು
  • ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ
  • ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ (ಮಹಿಳೆಯರ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ ಸಹಾಯಧನ)
  • ಭೂಸಿರಿ ಯೋಜನೆ (ರೈತರಿಗೆ 10 ಸಾವಿರ ರೂ. ಸಹಾಯಧನ)
  • ಶ್ರಮಶಕ್ತಿ ಯೋಜನೆ (ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ.)
  • ಅಗ್ನಿವೀರ್‌ ಯೋಜನೆಗೆ ಸೇರುವ ಎಸ್‌ಸಿ / ಎಸ್‌ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ
  • ಮಕ್ಕಳ‌ ಬಸ್ – ಉಚಿತ ಬಸ್ ಯೋಜನೆ
  • ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!