BREAKING NEWS

ಕರ್ನಾಟಕ ಬಜೆಟ್‌ 2023-24: ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಗಳಿಗೆ ಸಿಎಂ ಕೊಕ್‌!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಕೊಕ್‌ ನೀಡಿದ್ದಾರೆ. ಪ್ರಮುಖವಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿ ವಿದ್ಯಾನಿಧಿ ಯೋಜನೆಗೆ ಅನುದಾನವನ್ನು ಸಿದ್ದರಾಮಯ್ಯ ಮುಂದುವರಿಸಿಲ್ಲ.

ಅದಲ್ಲದೇ ಬಿಎಸ್‌ ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆಗೂ ಕೂಡ ಸಿದ್ದರಾಮಯ್ಯ ಅವರು ಅನುದಾನದ ಹಂಚಿಕೆ ಮಾಡಿಲ್ಲ. ಇನ್ನು, ಜಿಲ್ಲೆಗೊಂದು ಗೋಶಾಲೆ ಯೋಜನೆಗೂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಬ್ರೇಕ್‌ ಹಾಕಿದ್ದು, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಸಹಾಯ ಧನ ನೀಡುವ ಯೋಜನೆಯನ್ನು ಕೂಡ ಸಿದ್ದರಾಮಯ್ಯ ಕೈಬಿಟ್ಟಿದ್ದಾರೆ.

ಯಾವೆಲ್ಲಾ ಬಿಜೆಪಿ ಯೋಜನೆಗಳಿಗೆ ಸಿದ್ದು ಕೊಕ್‌?

  • ರೈತ ವಿದ್ಯಾನಿಧಿ ಯೋಜನೆ (ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ)
  • ವಿವೇಕ ಶಾಲೆ ಅಭಿವೃದ್ಧಿ ಯೋಜನೆ
  • ಹೆಣ್ಣುಮಕ್ಕಳ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆ
  • ಜಿಲ್ಲೆಗೊಂದು ಗೋಶಾಲೆ ಯೋಜನೆ
  • ಎಪಿಎಂಸಿ ಕಾಯ್ದೆ ರದ್ದು
  • ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು
  • ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ
  • ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ (ಮಹಿಳೆಯರ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ ಸಹಾಯಧನ)
  • ಭೂಸಿರಿ ಯೋಜನೆ (ರೈತರಿಗೆ 10 ಸಾವಿರ ರೂ. ಸಹಾಯಧನ)
  • ಶ್ರಮಶಕ್ತಿ ಯೋಜನೆ (ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ.)
  • ಅಗ್ನಿವೀರ್‌ ಯೋಜನೆಗೆ ಸೇರುವ ಎಸ್‌ಸಿ / ಎಸ್‌ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ
  • ಮಕ್ಕಳ‌ ಬಸ್ – ಉಚಿತ ಬಸ್ ಯೋಜನೆ
  • ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ
andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago