BREAKING NEWS

ಕರ್ನಾಟಕ ಬಜೆಟ್‌ 2023-24: ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಗಳಿಗೆ ಸಿಎಂ ಕೊಕ್‌!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಕೊಕ್‌ ನೀಡಿದ್ದಾರೆ. ಪ್ರಮುಖವಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿ ವಿದ್ಯಾನಿಧಿ ಯೋಜನೆಗೆ ಅನುದಾನವನ್ನು ಸಿದ್ದರಾಮಯ್ಯ ಮುಂದುವರಿಸಿಲ್ಲ.

ಅದಲ್ಲದೇ ಬಿಎಸ್‌ ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆಗೂ ಕೂಡ ಸಿದ್ದರಾಮಯ್ಯ ಅವರು ಅನುದಾನದ ಹಂಚಿಕೆ ಮಾಡಿಲ್ಲ. ಇನ್ನು, ಜಿಲ್ಲೆಗೊಂದು ಗೋಶಾಲೆ ಯೋಜನೆಗೂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಬ್ರೇಕ್‌ ಹಾಕಿದ್ದು, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಸಹಾಯ ಧನ ನೀಡುವ ಯೋಜನೆಯನ್ನು ಕೂಡ ಸಿದ್ದರಾಮಯ್ಯ ಕೈಬಿಟ್ಟಿದ್ದಾರೆ.

ಯಾವೆಲ್ಲಾ ಬಿಜೆಪಿ ಯೋಜನೆಗಳಿಗೆ ಸಿದ್ದು ಕೊಕ್‌?

  • ರೈತ ವಿದ್ಯಾನಿಧಿ ಯೋಜನೆ (ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ)
  • ವಿವೇಕ ಶಾಲೆ ಅಭಿವೃದ್ಧಿ ಯೋಜನೆ
  • ಹೆಣ್ಣುಮಕ್ಕಳ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆ
  • ಜಿಲ್ಲೆಗೊಂದು ಗೋಶಾಲೆ ಯೋಜನೆ
  • ಎಪಿಎಂಸಿ ಕಾಯ್ದೆ ರದ್ದು
  • ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು
  • ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ
  • ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ (ಮಹಿಳೆಯರ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ ಸಹಾಯಧನ)
  • ಭೂಸಿರಿ ಯೋಜನೆ (ರೈತರಿಗೆ 10 ಸಾವಿರ ರೂ. ಸಹಾಯಧನ)
  • ಶ್ರಮಶಕ್ತಿ ಯೋಜನೆ (ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ.)
  • ಅಗ್ನಿವೀರ್‌ ಯೋಜನೆಗೆ ಸೇರುವ ಎಸ್‌ಸಿ / ಎಸ್‌ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ
  • ಮಕ್ಕಳ‌ ಬಸ್ – ಉಚಿತ ಬಸ್ ಯೋಜನೆ
  • ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ
andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

2 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

2 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

3 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago