ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ ಮೂಲಕ ಆದಾಯ ಹೆಚ್ಚಳದ ಗುರಿ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದಾಯದ ಅವಶ್ಯಕತೆ ಇದ್ದು, ಹಲವು ಮೂಲಗಳಿಂದ ಇದನ್ನು ಸಂಗ್ರಹಿಸಲು ಸಿದ್ದರಾಮಯ್ಯ ಬಜೆಟ್ನಲ್ಲಿ ಗುರಿ ಹಾಕಿಕೊಂಡಿದ್ದಾರೆ.
ಅತ್ಯಧಿಕ ತೆರಿಗೆ ಪಾವತಿಸುವವರಿಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.
ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 10ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175 ರಿಂದ 185ಕ್ಕೆ ಹೆಚ್ಚಳವಾಗಲಿದೆ.
ಪರಿಷ್ಕರಣೆಯಾಗಲಿದೆ ಸ್ಥಿರಾಸ್ತಿ ಮಾರ್ಗಸೂಚಿ ದರ: ಎಲ್ಲ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ 2019ರ ನಂತರ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರಲಿಲ್ಲ. ಪ್ರಸ್ತುತ ಮಾರುಕಟ್ಟೆ ದರದಲ್ಲಿ ವ್ಯತ್ಯಾಸವಾಗಿರುವುದರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಆದರೆ, ಎಷ್ಟು ಪ್ರಮಾಣದಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ.
ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪಿಸಲಾಗಿದೆ. 11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ. ಕರ್ನಾಟಕ ಮೋಟಾರು ವಾಹನ ನೋಂದಣಿ ತೆರಿಗೆ ಹೆಚ್ಚಳಕ್ಕೆ ಉದ್ದೇಶಿಸಲಾಗಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಳ ಮಾಡಲಾಗುತ್ತದ ಎಂಬ ಮಾಹಿತಿ ನೀಡಿಲ್ಲ.
ಗಣಿ ಮತ್ತು ಭೂವಿಜ್ಞಾನ ಕ್ಷೇತ್ರದಿಂದ 9,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…
ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…
ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…
ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …
ದಿನೇಶ್ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…