BREAKING NEWS

ಕರ್ನಾಟಕ ಬಜೆಟ್‌ 2023-24| ಸಿದ್ದರಾಮಯ್ಯ ಬಜೆಟ್​​ನಲ್ಲಿ ತೆರಿಗೆ ಹೆಚ್ಚಳದ ವಿವರ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ  ಮೂಲಕ ಆದಾಯ ಹೆಚ್ಚಳದ ಗುರಿ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದಾಯದ ಅವಶ್ಯಕತೆ ಇದ್ದು, ಹಲವು ಮೂಲಗಳಿಂದ ಇದನ್ನು ಸಂಗ್ರಹಿಸಲು ಸಿದ್ದರಾಮಯ್ಯ ಬಜೆಟ್​​ನಲ್ಲಿ ಗುರಿ ಹಾಕಿಕೊಂಡಿದ್ದಾರೆ.

ಅತ್ಯಧಿಕ ತೆರಿಗೆ ಪಾವತಿಸುವವರಿಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 10ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175 ರಿಂದ 185ಕ್ಕೆ ಹೆಚ್ಚಳವಾಗಲಿದೆ.

ಪರಿಷ್ಕರಣೆಯಾಗಲಿದೆ ಸ್ಥಿರಾಸ್ತಿ ಮಾರ್ಗಸೂಚಿ ದರ: ಎಲ್ಲ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ 2019ರ ನಂತರ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರಲಿಲ್ಲ. ಪ್ರಸ್ತುತ ಮಾರುಕಟ್ಟೆ ದರದಲ್ಲಿ ವ್ಯತ್ಯಾಸವಾಗಿರುವುದರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಆದರೆ, ಎಷ್ಟು ಪ್ರಮಾಣದಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ.

ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪಿಸಲಾಗಿದೆ. 11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ. ಕರ್ನಾಟಕ ಮೋಟಾರು ವಾಹನ ನೋಂದಣಿ ತೆರಿಗೆ ಹೆಚ್ಚಳಕ್ಕೆ ಉದ್ದೇಶಿಸಲಾಗಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಳ ಮಾಡಲಾಗುತ್ತದ ಎಂಬ ಮಾಹಿತಿ ನೀಡಿಲ್ಲ.

ಗಣಿ ಮತ್ತು ಭೂವಿಜ್ಞಾನ ಕ್ಷೇತ್ರದಿಂದ 9,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

58 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago