BREAKING NEWS

ಕರ್ನಾಟಕ ಬಜೆಟ್‌: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್​​ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್​ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.

ಬಜೆಟ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೆ, ಅನ್ನಭಾಗ್ಯ ಯೋಜನೆಗೆ ವಾರ್ಷಿಕ 10,000 ಕೋಟಿ ರೂಪಾಯಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯದ 40 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ ನೀಡಲು 1,680 ಕೋಟಿ ಮೀಸಲಿಡಲಾಗುವುದು ಎಂದೂ ಬಜೆಟ್​​ನಲ್ಲಿ ಭರವಸೆ ನೀಡಲಾಗಿದೆ.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

58 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago