BREAKING NEWS

ಇಂದು ಕರ್ನಾಟಕ ಚುನಾವಣೆ : ಐದು ಕೋಟಿಗೂ ಹೆಚ್ಚು ಜನರ ಮೇಲೆ ನಿಂತಿದೆ ರಾಜ್ಯದ ಭವಿಷ್ಯ

ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ.

ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆ ಕೂಡ ಕೈಗೊಳ್ಳಲಾಗಿದೆ.

ಇಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸೇರಿ ಅನೇಕರು ಬನ್ನಿ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ. 

ಕರ್ನಾಟಕ ಅಸೆಂಬ್ಲಿ ಚುನಾವಣೆ ವಿಶೇಷ

* ಒಟ್ಟು ಮತ ಕ್ಷೇತ್ರ – 224

* ಒಟ್ಟು ಅಭ್ಯರ್ಥಿಗಳು – 2631

* ಬಿಜೆಪಿ ಅಭ್ಯರ್ಥಿಗಳು – 224

* ಕಾಂಗ್ರೆಸ್ ಅಭ್ಯರ್ಥಿಗಳು – 223 (ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ)

* ಜೆಡಿಎಸ್ ಅಭ್ಯರ್ಥಿಗಳು – 207

* ಮತ ಕೇಂದ್ರ – 58,282

* ಮತಗಟ್ಟೆಯ ಭದ್ರತಾ ಸಿಬ್ಬಂದಿ – 84,119

* ವಿಶೇಷ ಸಿಬ್ಬಂದಿ ಸಂಖ್ಯೆ – 2,959

* ಮತದಾರರ ಸಂಖ್ಯೆ – 5.21 ಕೋಟಿ

* ಪುರುಷ ಮತದಾರರ ಸಂಖ್ಯೆ – 2.62 ಕೋಟಿ

* ಮಹಿಳಾ ಮತದಾರರ ಸಂಖ್ಯೆ – 2.59 ಕೋಟಿ

* 112 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು

* ಫಸ್ಟ್ ಟೈಮ್ ವೋಟರ್‌ಗಳ ಸಂಖ್ಯೆ – 9.17 ಲಕ್ಷ

* 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ – 16,976

* ಶಾಂತಿ ಭದ್ರತೆಗೆ ನಿಯೋಜನೆಯಾದ ಪೊಲಿಸರು – 2.2 ಲಕ್ಷ

lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago