ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ.
ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆ ಕೂಡ ಕೈಗೊಳ್ಳಲಾಗಿದೆ.
ಇಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸೇರಿ ಅನೇಕರು ಬನ್ನಿ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.
ಕರ್ನಾಟಕ ಅಸೆಂಬ್ಲಿ ಚುನಾವಣೆ ವಿಶೇಷ
* ಒಟ್ಟು ಮತ ಕ್ಷೇತ್ರ – 224
* ಒಟ್ಟು ಅಭ್ಯರ್ಥಿಗಳು – 2631
* ಬಿಜೆಪಿ ಅಭ್ಯರ್ಥಿಗಳು – 224
* ಕಾಂಗ್ರೆಸ್ ಅಭ್ಯರ್ಥಿಗಳು – 223 (ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ)
* ಜೆಡಿಎಸ್ ಅಭ್ಯರ್ಥಿಗಳು – 207
* ಮತ ಕೇಂದ್ರ – 58,282
* ಮತಗಟ್ಟೆಯ ಭದ್ರತಾ ಸಿಬ್ಬಂದಿ – 84,119
* ವಿಶೇಷ ಸಿಬ್ಬಂದಿ ಸಂಖ್ಯೆ – 2,959
* ಮತದಾರರ ಸಂಖ್ಯೆ – 5.21 ಕೋಟಿ
* ಪುರುಷ ಮತದಾರರ ಸಂಖ್ಯೆ – 2.62 ಕೋಟಿ
* ಮಹಿಳಾ ಮತದಾರರ ಸಂಖ್ಯೆ – 2.59 ಕೋಟಿ
* 112 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು
* ಫಸ್ಟ್ ಟೈಮ್ ವೋಟರ್ಗಳ ಸಂಖ್ಯೆ – 9.17 ಲಕ್ಷ
* 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ – 16,976
* ಶಾಂತಿ ಭದ್ರತೆಗೆ ನಿಯೋಜನೆಯಾದ ಪೊಲಿಸರು – 2.2 ಲಕ್ಷ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…