ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು ಶಂಕರ್ ತಿಳಿಸಿದ್ದಾರೆ.
ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ರಾಜಭವನದಲ್ಲಿಯೇ ಥಾವರ್ ಚಂದ್ ಗೆಹ್ಲೋಟ್ ಕ್ವಾರಂಟೈನ್ ನಿಯಮ ಅನುಸರಿಸುತ್ತಿದ್ದು, ಮುಂದಿನ ಸೂಚನೆವರೆಗೆ ಅವರ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





