BREAKING NEWS

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಒಟ್ಟು 5 ಸ್ಥಾನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕ್ಷ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ರಾಜಾಜಿನಗರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಕಂಡಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಮೊನ್ನೇ ಅಷ್ಟೇ ಬಿಜೆಪಿ ತೊರೆದು ಕಾಂಂಗ್ರೆಸ್ ಸೇರಿರುವ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಟಿ.ಡಿ.ಶ್ರೀನಿವಾಸ್ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್​ ನೀಡಲಾಗಿದೆ.

ಕ್ಷೇತ್ರ ಮತ್ತು ಅಭ್ಯರ್ಥಿ ಹೆಸರು

1.ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿಗೌಡ
2.ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
3.ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್
4.ಆಗ್ನೇಯ ಶಿಕ್ಷಕರ ಕ್ಷೇತ್ರ-ಟಿ.ಡಿ.ಶ್ರೀನಿವಾಸ್
5.ಈಶಾನ್ಯ ಪದವೀಧರ ಕ್ಷೇತ್ರ-ಡಾ.ಚಂದ್ರಶೇಖರ ಪಾಟೀಲ್

ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಪದವೀಧರರು ಆಸಕ್ತಿಯನ್ನು ತೋರಿಸುತ್ತಿಲ್ಲ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

lokesh

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago