BREAKING NEWS

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಪ್ರಥಮ?

ಬೆಂಗಳೂರು: ಕಳೆದ ಮಾರ್ಚ್‌ 1ರಿಂದ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ( ಏಪ್ರಿಲ್‌ 10 ) ಪ್ರಕಟಗೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಗೊಳಿಸಿದೆ. ಈ ಬಾರಿ 5,52,690 ( ಶೇ. 81.15 ) ಶೇ. 81.15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 80.94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 89.96% ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 68.36% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಉಡುಪಿ ಜಿಲ್ಲೆ ಎರಡನೇ ಸ್ಥಾನ ಪಡೆದುಕೊಂಡಿದೆ, ಮೂರನೇ ಸ್ಥಾನದಲ್ಲಿ ವಿಜಯಪುರವಿದ್ದು, ನಾಲ್ಕನೇ ಸ್ಥಾನ ಉತ್ತರ ಕನ್ನಡ ಹಾಗೂ ಐದನೇ ಸ್ಥಾನ ಕೊಡಗು ಜಿಲ್ಲೆಯದ್ದಾಗಿದೆ. ಗದಗ ಕೊನೆಯ ಸ್ಥಾನ ಪಡೆದುಕೊಂಡಿದೆ.

ಈ ಬಾರಿಯ ಪರೀಕ್ಷೆಯಲ್ಲಿ 3.3 ಲಕ್ಷ ವಿದ್ಯಾರ್ಥಿಗಳು ಹಾಗೂ 3.6 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಬಾಲಕಿಯರು ( 84.87% ) ಮೇಲುಗೈ ಸಾಧಿಸಿದ್ದರೆ, 76.98% ಬಾಲಕರು ತೇರ್ಗಡೆಯಾಗಿದ್ದಾರೆ. 91 ಸರ್ಕಾರಿ ಕಾಲೇಜುಗಳು ಸೇರಿದಂತೆ ಒಟ್ಟು 463 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದ್ದು, 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಯಾರು ಟಾಪರ್ಸ್?‌

ವಿಜ್ಞಾನ ವಿಭಾಗದಲ್ಲಿ 600ಕ್ಕೆ 598 ಅಂಕಗಳನ್ನು ಪಡೆದುಕೊಂಡಿರುವ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ಪಡೆದಿರುವ ಮೇಧಾ ಹಾಗೂ ವಿಜಯಪುರದ ವೇದಾಂತ್‌ ಟಾಪರ್‌ ಎನಿಸಿಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 597 ಅಂಕಗಳನ್ನು ಪಡೆದುಕೊಂಡಿರುವ ತುಮಕೂರಿನ ಜ್ಞಾನವಿ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

 

 

andolana

Recent Posts

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

42 mins ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

59 mins ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

1 hour ago

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…

1 hour ago

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…

2 hours ago

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

3 hours ago