BREAKING NEWS

ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ಡಿಸೆಂಬರ್‌ ಅಂತ್ಯದವರೆಗೂ ಇಷ್ಟು ಕ್ಯೂಸೆಕ್ ನೀರು ಹರಿಸಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಪದೇ ಪದೇ ಹಿನ್ನಡೆ ಆಗುತ್ತಲೇ ಇದೆ. ಇಂದು ( ನವೆಂಬರ್‌ 23 ) ಹೊಸದೊಂದು ಆದೇಶ ಹೊರಡಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಡಿಸೆಂಬರ್‌ ಅಂತ್ಯದವರೆಗೂ ಕರ್ನಾಟಕ ತಮಿಳುನಾಡಿಗೆ ದಿನನಿತ್ಯ 2700 ಕ್ಯೂಸೆಕ್‌ ನೀರನ್ನು ಹರಿಸಬೇಕು ಎಂದಿದೆ.

ಇಂದಿನಿಂದ ( ನವೆಂಬರ್‌ 23 ) ಡಿಸೆಂಬರ್‌ 23 ರ ತನಕ ಸರಿಯಾಗಿ ಒಂದು ತಿಂಗಳ ಕಾಲ ಪ್ರತಿನಿತ್ಯ 2700 ಕ್ಯೂಸೆಕ್‌ ನೀರನ್ನು ಹರಿಸಬೇಕು ಎಂದು ಆದೇಸ ಬಂದಿದೆ. ಈಗಾಗಲೇ ಮಳೆ ಇಲ್ಲದೇ ಇಲ್ಲಿನ ಬೆಳೆಗಳಿಗೆ ನೀರಿನ ಅಭಾವ ಎದುರಿಸುತ್ತಿರುವ ಕರ್ನಾಟಕ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಯೋಚಿಸುತ್ತಿರುವಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂಥದ್ದೊಂದು ಆದೇಶ ಹೊರಡಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕೆಆರ್‌ಎಸ್‌ನಲ್ಲಿ ಇಲ್ಲ ನೀರು 

ಒಂದೆಡೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಇಂಥ ಆದೇಶವನ್ನೇನೋ ನೀಡಿದೆ. ಆದರೆ ಕೃಷ್ಣ ರಾಜ ಸಾಗರ ಅಣೆಕಟ್ಟೆಯಲ್ಲಿ ಕೇವಲ 99 ಅಡಿ ನೀರಿದೆ. ಕೆಲ ದಿನಗಳ ಹಿಂದಷ್ಟೇ 100 ಅಡಿ ಮುಟ್ಟಿದ ಖುಷಿಯಲ್ಲಿದ್ದ ಜನರಿಗೆ ನೀರು ನೂರು ಅಡಿಗಿಂತ ತಗ್ಗಿದ ಸುದ್ದಿಯ ಜತೆ ಇದೀಗ ಮತ್ತೆ ನೀರು ಬಿಡಬೇಕೆಂಬ ಸುದ್ದಿ ಮತ್ತಷ್ಟು ಪೆಟ್ಟು ನೀಡಿದೆ.

ನೀರು ಎಷ್ಟಿದೆ? 

124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯದಲ್ಲಿ ಇಂದು 99.10 ಅಡಿ ನೀರು ಇದ್ದು 1450 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 3840 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್‌ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 49.482 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 22.113 ಟಿಎಂಸಿ ನೀರಿದೆ.

 

andolana

Recent Posts

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

30 mins ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

36 mins ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

58 mins ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

2 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

2 hours ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

2 hours ago