ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಪದೇ ಪದೇ ಹಿನ್ನಡೆ ಆಗುತ್ತಲೇ ಇದೆ. ಇಂದು ( ನವೆಂಬರ್ 23 ) ಹೊಸದೊಂದು ಆದೇಶ ಹೊರಡಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಡಿಸೆಂಬರ್ ಅಂತ್ಯದವರೆಗೂ ಕರ್ನಾಟಕ ತಮಿಳುನಾಡಿಗೆ ದಿನನಿತ್ಯ 2700 ಕ್ಯೂಸೆಕ್ ನೀರನ್ನು ಹರಿಸಬೇಕು ಎಂದಿದೆ.
ಇಂದಿನಿಂದ ( ನವೆಂಬರ್ 23 ) ಡಿಸೆಂಬರ್ 23 ರ ತನಕ ಸರಿಯಾಗಿ ಒಂದು ತಿಂಗಳ ಕಾಲ ಪ್ರತಿನಿತ್ಯ 2700 ಕ್ಯೂಸೆಕ್ ನೀರನ್ನು ಹರಿಸಬೇಕು ಎಂದು ಆದೇಸ ಬಂದಿದೆ. ಈಗಾಗಲೇ ಮಳೆ ಇಲ್ಲದೇ ಇಲ್ಲಿನ ಬೆಳೆಗಳಿಗೆ ನೀರಿನ ಅಭಾವ ಎದುರಿಸುತ್ತಿರುವ ಕರ್ನಾಟಕ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಯೋಚಿಸುತ್ತಿರುವಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂಥದ್ದೊಂದು ಆದೇಶ ಹೊರಡಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕೆಆರ್ಎಸ್ನಲ್ಲಿ ಇಲ್ಲ ನೀರು
ಒಂದೆಡೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಇಂಥ ಆದೇಶವನ್ನೇನೋ ನೀಡಿದೆ. ಆದರೆ ಕೃಷ್ಣ ರಾಜ ಸಾಗರ ಅಣೆಕಟ್ಟೆಯಲ್ಲಿ ಕೇವಲ 99 ಅಡಿ ನೀರಿದೆ. ಕೆಲ ದಿನಗಳ ಹಿಂದಷ್ಟೇ 100 ಅಡಿ ಮುಟ್ಟಿದ ಖುಷಿಯಲ್ಲಿದ್ದ ಜನರಿಗೆ ನೀರು ನೂರು ಅಡಿಗಿಂತ ತಗ್ಗಿದ ಸುದ್ದಿಯ ಜತೆ ಇದೀಗ ಮತ್ತೆ ನೀರು ಬಿಡಬೇಕೆಂಬ ಸುದ್ದಿ ಮತ್ತಷ್ಟು ಪೆಟ್ಟು ನೀಡಿದೆ.
ನೀರು ಎಷ್ಟಿದೆ?
124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯದಲ್ಲಿ ಇಂದು 99.10 ಅಡಿ ನೀರು ಇದ್ದು 1450 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 3840 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 49.482 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 22.113 ಟಿಎಂಸಿ ನೀರಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…