BREAKING NEWS

ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ಡಿಸೆಂಬರ್‌ ಅಂತ್ಯದವರೆಗೂ ಇಷ್ಟು ಕ್ಯೂಸೆಕ್ ನೀರು ಹರಿಸಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಪದೇ ಪದೇ ಹಿನ್ನಡೆ ಆಗುತ್ತಲೇ ಇದೆ. ಇಂದು ( ನವೆಂಬರ್‌ 23 ) ಹೊಸದೊಂದು ಆದೇಶ ಹೊರಡಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಡಿಸೆಂಬರ್‌ ಅಂತ್ಯದವರೆಗೂ ಕರ್ನಾಟಕ ತಮಿಳುನಾಡಿಗೆ ದಿನನಿತ್ಯ 2700 ಕ್ಯೂಸೆಕ್‌ ನೀರನ್ನು ಹರಿಸಬೇಕು ಎಂದಿದೆ.

ಇಂದಿನಿಂದ ( ನವೆಂಬರ್‌ 23 ) ಡಿಸೆಂಬರ್‌ 23 ರ ತನಕ ಸರಿಯಾಗಿ ಒಂದು ತಿಂಗಳ ಕಾಲ ಪ್ರತಿನಿತ್ಯ 2700 ಕ್ಯೂಸೆಕ್‌ ನೀರನ್ನು ಹರಿಸಬೇಕು ಎಂದು ಆದೇಸ ಬಂದಿದೆ. ಈಗಾಗಲೇ ಮಳೆ ಇಲ್ಲದೇ ಇಲ್ಲಿನ ಬೆಳೆಗಳಿಗೆ ನೀರಿನ ಅಭಾವ ಎದುರಿಸುತ್ತಿರುವ ಕರ್ನಾಟಕ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಯೋಚಿಸುತ್ತಿರುವಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂಥದ್ದೊಂದು ಆದೇಶ ಹೊರಡಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕೆಆರ್‌ಎಸ್‌ನಲ್ಲಿ ಇಲ್ಲ ನೀರು 

ಒಂದೆಡೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಇಂಥ ಆದೇಶವನ್ನೇನೋ ನೀಡಿದೆ. ಆದರೆ ಕೃಷ್ಣ ರಾಜ ಸಾಗರ ಅಣೆಕಟ್ಟೆಯಲ್ಲಿ ಕೇವಲ 99 ಅಡಿ ನೀರಿದೆ. ಕೆಲ ದಿನಗಳ ಹಿಂದಷ್ಟೇ 100 ಅಡಿ ಮುಟ್ಟಿದ ಖುಷಿಯಲ್ಲಿದ್ದ ಜನರಿಗೆ ನೀರು ನೂರು ಅಡಿಗಿಂತ ತಗ್ಗಿದ ಸುದ್ದಿಯ ಜತೆ ಇದೀಗ ಮತ್ತೆ ನೀರು ಬಿಡಬೇಕೆಂಬ ಸುದ್ದಿ ಮತ್ತಷ್ಟು ಪೆಟ್ಟು ನೀಡಿದೆ.

ನೀರು ಎಷ್ಟಿದೆ? 

124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯದಲ್ಲಿ ಇಂದು 99.10 ಅಡಿ ನೀರು ಇದ್ದು 1450 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 3840 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್‌ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 49.482 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 22.113 ಟಿಎಂಸಿ ನೀರಿದೆ.

 

andolana

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

45 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

11 hours ago