ಬೆಂಗಳೂರು : ಕರ್ನಾಟಕದ ಪಡಿತರ ವ್ಯವಸ್ಥೆ ಇದೀಗ ಮಲೇಷಿಯಾ ಸರ್ಕಾರದ ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಲು ಮಲೇಷಿಯಾದ ಉಪ ಸಚಿವರ ನಿಯೋಗ ರಾಜ್ಯಕ್ಕೆ ಆಗಮಿಸಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು ಬುಧವಾರ ಭೇಟಿಯಾದ ನಿಯೋಗದಲ್ಲಿ ಮಲೇಷಿಯಾದ ಉಪ ಸಚಿವರಾದ ವೈ.ಬಿ.ಸನತೇರ್ ಪುವನ್, ಹಜಾಯ್ ಪುಜಿಯಾ, ಬಿನಿಟಿ ಸಲೇಹ್ ಕುಮಾರಕೃಪ ಅತಿಥಿ ಗೃಹದಲ್ಲಿ ಚರ್ಚೆ ನಡೆಸಿದರು.
ರಾಜ್ಯದ ಆಹಾರ ಇಲಾಖೆಯಲ್ಲಿ ಯಾವ ರೀತಿಯಾದ ವ್ಯವಸ್ಥೆಗಳಿಂದ ಗ್ರಾಹಕರಿಗೆ ಆಹಾರ ಪದಾರ್ಥಗಳನ್ನು ತಲುಪಿಸಲಾಗುತ್ತಿದೆ ಮತ್ತು ಪಡಿತರ ಕಾರ್ಡ್ ಗಳನ್ನು ಯಾವ ಮಾದರಿಯಾಗಿ ಜನರಿಗೆ ನೀಡುತ್ತೀರಾ? ಎಂಬ ಮಾಹಿತಿಗಳನ್ನು ಮಲೇಷಿಯಾ ಸರ್ಕಾರದ ನಿಯೋಗ ಪಡೆದುಕೊಂಡಿದೆ.
ರಾಜ್ಯಕ್ಕೆ ಭೇಟಿ ನೀಡಿರುವ ಮಲೇಷಿಯಾದ ಸಚಿವರ ನಿಯೋಗ ಪಡಿತರ ವ್ಯವಸ್ಥೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದೆ. ಇನ್ನೂ ಎರಡು ದಿನಗಳು ಬೆಂಗಳೂರಿನಲ್ಲಿಯೇ ಉಳಿಯಲಿದ್ದು ಅಕ್ಕಿಯ ದಾಸ್ತಾನು ಗೊಡೌನ್ ಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿ ಅವರ ದೇಶದಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸುಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…