BREAKING NEWS

ಮಲೇಷಿಯಾ ಸರ್ಕಾರದ ಗಮನ ಸೆಳೆದ‌ ಕರ್ನಾಟಕದ ಪಡಿತರ ವ್ಯವಸ್ಥೆ

ಬೆಂಗಳೂರು : ಕರ್ನಾಟಕದ ಪಡಿತರ ವ್ಯವಸ್ಥೆ ಇದೀಗ ಮಲೇಷಿಯಾ ಸರ್ಕಾರದ ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಲು ಮಲೇಷಿಯಾದ ಉಪ ಸಚಿವರ ನಿಯೋಗ ರಾಜ್ಯಕ್ಕೆ ಆಗಮಿಸಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು ಬುಧವಾರ ಭೇಟಿಯಾದ ನಿಯೋಗದಲ್ಲಿ ಮಲೇಷಿಯಾದ ಉಪ ಸಚಿವರಾದ ವೈ.ಬಿ.ಸನತೇರ್ ಪುವನ್, ಹಜಾಯ್ ಪುಜಿಯಾ, ಬಿನಿಟಿ ಸಲೇಹ್ ಕುಮಾರಕೃಪ ಅತಿಥಿ ಗೃಹದಲ್ಲಿ ಚರ್ಚೆ ನಡೆಸಿದರು.

ರಾಜ್ಯದ ಆಹಾರ ಇಲಾಖೆಯಲ್ಲಿ ಯಾವ ರೀತಿಯಾದ ವ್ಯವಸ್ಥೆಗಳಿಂದ ಗ್ರಾಹಕರಿಗೆ ಆಹಾರ ಪದಾರ್ಥಗಳನ್ನು ತಲುಪಿಸಲಾಗುತ್ತಿದೆ ಮತ್ತು ಪಡಿತರ ಕಾರ್ಡ್ ಗಳನ್ನು ಯಾವ ಮಾದರಿಯಾಗಿ ಜನರಿಗೆ ನೀಡುತ್ತೀರಾ? ಎಂಬ ಮಾಹಿತಿಗಳನ್ನು ಮಲೇಷಿಯಾ ಸರ್ಕಾರದ ನಿಯೋಗ ಪಡೆದುಕೊಂಡಿದೆ.

ರಾಜ್ಯಕ್ಕೆ ಭೇಟಿ ನೀಡಿರುವ ಮಲೇಷಿಯಾದ ಸಚಿವರ ನಿಯೋಗ ಪಡಿತರ ವ್ಯವಸ್ಥೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದೆ. ಇನ್ನೂ ಎರಡು ದಿನಗಳು ಬೆಂಗಳೂರಿನಲ್ಲಿಯೇ ಉಳಿಯಲಿದ್ದು ಅಕ್ಕಿಯ ದಾಸ್ತಾನು ಗೊಡೌನ್‌ ಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿ ಅವರ ದೇಶದಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸುಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

lokesh

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago