ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ. ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.
ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆ ಸರಿಪಡಿಸುವುದು ಅವರ ಹೊಣೆಗಾರಿಕೆ.ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು ‘ಕಾಮಿಡಿ ಕಿಲಾಡಿ” ಎನ್ನುವುದು ಎಂದು ಟಾಂಗ್ ನೀಡಿದೆ.
ಕಟೀಲ್ ಅವರೇ ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…