ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ. ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.
ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆ ಸರಿಪಡಿಸುವುದು ಅವರ ಹೊಣೆಗಾರಿಕೆ.ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು ‘ಕಾಮಿಡಿ ಕಿಲಾಡಿ” ಎನ್ನುವುದು ಎಂದು ಟಾಂಗ್ ನೀಡಿದೆ.
ಕಟೀಲ್ ಅವರೇ ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ ಎಂದು ಕಾಂಗ್ರೆಸ್ ಕಿಡಿಕಾರಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…