ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ಜಿಲ್ಲೆಯಲ್ಲಿ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಕಾವೇರಿ ಬಂದ್ ಬಿಸಿ ತಟ್ಟದೆ ಕನ್ನಡ ಪರ ಹಾಗೂ ರೈತ ಸಂಘಟನೆಗಳಿಗೆ ಮಾತ್ರ ಪ್ರತಿಭಟನೆ ಸೀಮಿತವಾಗಿದೆ. ಮುಂಜಾನೆಯಿಂದಲೂ ಜಿಲ್ಲೆಯಲ್ಲಿ ಸಾರಿಗೆ, ಆಟೋ ಸಂಚಾರ, ಅಂಗಡಿ ಮುಗ್ಗಟ್ಟು, ವ್ಯಾಪಾರ – ವಹಿವಾಟು ಸೇರಿದಂತೆ ಜನ ಜೀವನ ಎಂದಿನಂತೆ ಸಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ.
11 ಗಂಟೆಯ ನಂತರ ಕೊಡಗು ಹಾಗೂ ಮೈಸೂರು ಗಡಿ ಭಾಗವಾದ ಕುಶಾಲನಗರದ ಕಾವೇರಿ ನದಿಯ ಬಳಿ ಕರ್ನಾಟಕ ಕಾವಲು ಪಡೆಯ ಕಾರ್ಯಕರ್ತರು ರೈತರು ಪ್ರತಿಭಟನೆ ಭಾಗಿಯಾಗಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಎಂದಿನಂತೆ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…